ಚಟುವಟಿಕೆಗಳು

ಶೈಕ್ಷಣಿಕ ನೆರವು

ಸರ್ಕಾರಿ ಶಾಲೆಗಳ ಮಕ್ಕಳಿಗೆ ಶಾಲಾ ಚೀಲಗಳು ಮತ್ತು ಅಧ್ಯಯನ ಸಾಮಗ್ರಿಗಳನ್ನು ವಿತರಿಸುವ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಉತ್ತೇಜನ ನೀಡಿದೆ.

ಆರೋಗ್ಯ ಸೇವೆಗಳು

ಅಗತ್ಯವಿರುವವರಿಗೆ ರಕ್ತದಾನ ಅಭಿಯಾನಗಳು ಮತ್ತು ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸುವ ಮೂಲಕ ಸಾರ್ವಜನಿಕ ಆರೋಗ್ಯ ಸುಧಾರಣೆಗೆ ಶ್ರಮಿಸಿದೆ.

ಯುವಜನರ ಸಬಲೀಕರಣ

ಶೈಕ್ಷಣಿಕ ಮಾರ್ಗದರ್ಶನ ಮತ್ತು ಸಮುದಾಯ ಉಪಕ್ರಮಗಳ ಮೂಲಕ ಯುವಕರನ್ನು ಬೆಂಬಲಿಸಿ, ಸಮಾಜಕ್ಕೆ ಕೊಡುಗೆ ನೀಡಲು ಪ್ರೇರೇಪಿಸಿದೆ.

ಪರಿಹಾರ ಕಾರ್ಯ

ಕೇರಳದ ವಯನಾಡು ಪ್ರದೇಶದಲ್ಲಿ ಭೂಕುಸಿತದಿಂದ ಸಂಕಷ್ಟಕ್ಕೊಳಗಾದ ಜನರಿಗೆ ಸಹಾಯ ಹಸ್ತ ನೀಡುವಂತಹ ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಂಡಿದೆ.

ಕನ್ನಡ ನಾಡು-ನುಡಿ ಸೇವೆ

ಕನ್ನಡ ಭಾಷೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಹಲವಾರು ಚಳುವಳಿಗಳು, ಜಾಗೃತಿ ಅಭಿಯಾನಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ.

ಸಾಮಾಜಿಕ ಸ್ಪಂದನ

ರಾಜ್ಯದ ರೈತ, ಕಾರ್ಮಿಕ, ಸೈನಿಕ, ಶಿಕ್ಷಕ, ಮಹಿಳೆಯರ ಕಷ್ಟಗಳಿಗೆ ವಿಶೇಷ ಕಾಳಜಿಯಿಂದ ಸ್ಪಂದಿಸುತ್ತಾ, ನೆರವಾಗುತ್ತಾ ಬಂದಿದೆ.

ಟ್ರಸ್ಟ್‌ನ ಇತಿಹಾಸ

2010 ರಲ್ಲಿ ‘ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ’ ಎಂಬ ಕನ್ನಡಪರ ಸಂಘಟನೆಯಾಗಿ ಅಸ್ತಿತ್ವಕ್ಕೆ ಬಂದಿತು. ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉನ್ನತಿಗಾಗಿ ಶ್ರಮಿಸುವ, ಕನ್ನಡಿಗರ ಹಕ್ಕುಗಳನ್ನು ರಕ್ಷಿಸುವ ದೃಷ್ಟಿಯಿಂದ ತಾಯ್ನಾಡು ರಾಘವೇಂದ್ರ ಅವರು ಈ ಸಂಘಟನೆಯನ್ನು ಸ್ಥಾಪಿಸಿದರು. ಸಂಘಟನೆಯ ರಾಜ್ಯಾಧ್ಯಕ್ಷರಾಗಿ ಹೊಣೆ ಹೊತ್ತ ಅವರು, ಸ್ಪಷ್ಟ ರೂಪರೇಷೆಗಳೊಂದಿಗೆ ಸಂಘವನ್ನು ಬೆಳೆಸಲು ಮುಂದಾದರು. ಆರಂಭವಾದ ಕೆಲವೇ ತಿಂಗಳಲ್ಲಿ ರಾಜ್ಯದಾದ್ಯಂತ ವಿಸ್ತರಿಸಿ, ಜಿಲ್ಲಾ ಮಟ್ಟದಲ್ಲಿ ಸಾವಿರಾರು ಕಾರ್ಯಕರ್ತರು ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದಾರೆ.

ಗ್ಯಾಲರಿ